ದ್ವೇಷವಿದೇಕೆ ಛಲವೇಕೆ?
ನಿನ್ನಯ ಮನವು ಆಲದ ಮರವು
ಮನುಜನ ಮನವು ತೃಣವೇಕೆ?
ಅಡಿಗಡಿಗೊಂದು ಗಡಿಗಳು ಏಕೆ
ನಿನ್ನದೇ ಅಲ್ಲವೇ ಜಗವೆಲ್ಲಾ?
ನೇಸರ ನಮ್ಮನು ಸುತ್ತುತಲಿದ್ದರೂ
ಕತ್ತಲಲಿ ನಮ್ಮಯ ಬದುಕೆಲ್ಲಾ
ಭೂಮಿಯ ಸೀರೆಯ ಅಂಚಿನ ತುಂಬ
ಮನುಜನ ರಕುತದ ಕಲೆ ಏಕೆ?
ಕಿವಿಗಪ್ಪಳಿಸಿವೆ ಹಾಹಾಕಾರ
ಒಲುಮೆಯ ಮಾತು ಕೇಳಿಸದು
ನುಚ್ಚುನೂರಾದವು ಸಾವಿರ ಕನಸು
ಜೋಡಿಪರಾರೂ ಕಾಣಿಸದು
ಮನದ ಬಾಗಿಲಿಗೆ ಬಿದ್ದಿದೆ ಬೀಗ
ಬೀಗಕೆ ಹಿಡಿದಿದೆ ತುಕ್ಕೇಕೆ?
(ಜಾವೇದ್ ಅಖ್ತರ್ 1947-EARTH ಚಿತ್ರಕ್ಕೆ ಬರೆದು, ಎ ಆರ್ ರೆಹಮಾನ್ ಸಂಗೀತ ನೀಡಿದ ಹಾಡಿನ ಅನುವಾದ. ಅದೇ ಧಾಟಿಯಲ್ಲಿ ಹಾಡಬಹುದು)